ಅನ್ವಿತ್ ಎಸ್. ಚಾಂಪಿಯನ್

ಮಡಿಕೇರಿ, ಡಿ .೮ : ಇತ್ತೀಚೆಗೆ ದುಬೈಯಲ್ಲಿ ನಡೆದ ಅಂತರರಾಷ್ಟಿçÃಯ ಮಟ್ಟದ ೧೫ನೇ ಬ್ರೆöÊನೋಬ್ರೆöÊನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅನ್ವಿತ್ ಎಸ್. ಜೂನಿಯರ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.

ನಗರದ ಬ್ರೆöÊನೋಬ್ರೆöÊನ್ ಅಬಕಾಸ್ ಸಂಸ್ಥೆಯ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರ ಬಳಿ ಅನ್ವಿತ್ ಎಸ್. ತರಬೇತಿ ಪಡೆಯುತ್ತಿದ್ದಾನೆ. ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಅನ್ವಿತ್ ಸೇರಿದಂತೆ ಕರ್ನಾಟಕ ರಾಜ್ಯದ ಆರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸುಮಾರು ೧೬ ದೇಶಗಳ ೧೮೦೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮದೆನಾಡಿನ ಬಿಜಿಎಸ್ ಶಾಲೆಯ ೩ನೇ ತರಗತಿಯ ವಿದ್ಯಾರ್ಥಿಯಾಗಿರುವ ಎಂಟು ವರ್ಷದ ಅನ್ವಿತ್ ಎಸ್. ಮದೆನಾಡು ಮದೆ ಮಹೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕÀ ಶ್ರೀನಿವಾಸ ವಿ. ಹಾಗೂ ಪವಿತ್ರ ಎಂ.ಎನ್. ದಂಪತಿಯ ಪುತ್ರ.

ಬಹುಮಾನ ವಿತರಣಾ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಬ್ರೆöÊನೋಬ್ರೆöÊನ್ ಅಂತರರಾಷ್ಟಿçÃಯ ದುಬೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸುಬ್ರಮಣ್ಯಂ ಹಾಗೂ ತಾಂತ್ರಿಕ ನಿರ್ದೇಶಕ ಅರುಲ್ ಸುಬ್ರಮಣ್ಯಂ ಅವರು ಅನ್ವಿತ್ ಸಾಧನೆಯನ್ನು ಶ್ಲಾಘಿಸಿದರು.

ಮಾರ್ಗದರ್ಶಕಿ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಅನ್ವಿತ್, ರಾಷ್ಟçಮಟ್ಟ ಮತ್ತು ಅಂತರರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವುದು ಹೆಮ್ಮೆ ಎನಿಸಿದೆ ಎಂದರು.