ವೀರಾಜಪೇಟೆ, ಡಿ. ೯ : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್ಸಿಸಿ ಘಟಕದ ಏರ್ವಿಂಗ್ ಹಾಗೂ ಆರ್ಮಿ ವಿಂಗ್ಗಳ ವತಿಯಿಂದ ಸಶಸ್ತç ಪಡೆಗಳ ಧ್ವಜ ದಿನಾಚರಣೆ ಪ್ರಯುಕ್ತ ಎನ್ಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ನಡೆಯಿತು.
ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ನ ಪ್ರಧಾನ ಗುರುಗಳಾದ ರೆ.ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ಜಾಥಾಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್, ಮಕ್ಕಳಲ್ಲಿ ಧೈರ್ಯ ಮನೋಭಾವನೆ ಮೂಡಬೇಕು. ವಾಯು ಮಾಲಿನ್ಯ ಹೆಚ್ಚಳ ವಾಗುತ್ತಿರುವ ಈ ಸಂದರ್ಭದಲ್ಲಿ ಅದನ್ನು ನಿಯಂತ್ರಿಸಿ ಪರಿಸರ ಸಂರಕ್ಷಣೆಗೆ ಗಮನ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿ ಯನ್ನು ಮೂಡಿಸಿ ಎಂದು ಕರೆ ನೀಡಿದರು.
ಎನ್ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಆ ಮೂಲಕ ನಾವು ನಮ್ಮ ಸೈನಿಕರಿಗೆ ಗೌರವವನ್ನು ಸಲ್ಲಿಸುತ್ತಿದ್ದೇವೆ. ವಿದ್ಯಾರ್ಥಿಗಳು ಸೈಕಲ್ ಜಾಥಾದ ಮೂಲಕ ಸಮಾಜಮುಖಿ ಕಾರ್ಯ ಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ. ನಮ್ಮ ಸೈನಿಕರು ನಮ್ಮ ದೇಶದ ಹೆಮ್ಮೆಯಾಗಿದ್ದು, ಅವರ ಪರಿಶ್ರಮವನ್ನು ಗೌರವಿಸಬೇಕು ಎಂದರು. ೬೦ಕ್ಕೂ ಅಧಿಕ ಎನ್ಸಿಸಿ ವಿದ್ಯಾರ್ಥಿಗಳನ್ನು ಒಳಗೊಂಡ ಸೈಕಲ್ ಜಾಥಾವು ವೀರಾಜಪೇಟೆ ನಗರ, ಆರ್ಜಿ ಗ್ರಾಮ -ಬೇಟೋಳಿ ರಾಮನಗರದ ಮೂಲಕ ಹೆಗ್ಗಳದ ಸ್ನೇಹ ಭವನ ವೃದ್ದಾಶ್ರಮವನ್ನು ತಲುಪಿತು. ರಾಮನಗರ ಅಂಗಡಿಯ ಸಮೀಪದಿಂದ ಸರಕಾರಿ ಶಾಲೆಯವರೆಗೂ ಎನ್ಸಿಸಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯವನ್ನು ನಡೆಸಿದರು. ನಂತರ ಹೆಗ್ಗಳದ ಸ್ನೇಹ ಭವನದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ಥಳದಲ್ಲಿಯೇ ಅಡುಗೆ ತಯಾರಿಸಿ ಸ್ನೇಹ ಭವನದ ಹಿರಿಯರಿಗೆ ಬಡಿಸಿದರು. ಹಿರಿಯರಿಗೆ ಮನೋರಂಜನ ಕ್ರೀಡೆ, ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮಗಳು ಮೂಡಿ ಬಂದವು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ನೇಹ ಭವನದ ಹಿರಿಯರ ಯೋಗಕ್ಷೇಮವನ್ನು ವಿಚಾರಿಸುವುದರ ಮೂಲಕ ಉಭಯ ಕುಶಲೋಪರಿಯನ್ನು ನಡೆಸಿದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರುಗಳಾದ ಬೆನ್ನಿ ಜೋಸೆಫ್, ಟೀನಾ ಫರ್ನಾಂಡಿಸ್, ಎನ್ಸಿಸಿ ಏರ್ ವಿಂಗ್ ಅಧಿಕಾರಿ ಅಬ್ದುಲ್ ಮುನೀರ್, ಆರ್ಮಿ ವಿಂಗ್ನ ಅಧಿಕಾರಿ ಸಹನಾ, ಸಹ ಶಿಕ್ಷಕರುಗಳು, ಸಿಬ್ಬಂದಿಗಳು, ಎನ್ಸಿಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.