ಮಡಿಕೇರಿ ಡಿ. ೧೦: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ‘ಯುವನಿಧಿ’ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಆಸಕ್ತ ಯುವನಿಧಿ ಫಲಾನುಭವಿಗಳಿಗೆ ಎರಡು ವಾರಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.

ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ತಾ. ೨೫ ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ ಮಡಿಕೇರಿ ಈ ವಿಳಾಸಕ್ಕೆ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಕರೆ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ. ೭೭೬೦೧೪೫೭೮೪/ ೮೩೧೦೭೩೮೮೧೯ ನ್ನು ಸಂಪರ್ಕಿಸಬಹುದು.