ಮಡಿಕೇರಿ, ಡಿ. ೨೬: ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನಾ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಎಂ.ಜಿ. ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸುವ ಮೂಲಕ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆಯಿತು.
ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷಿö್ಮ ಯೋಜನೆಯಡಿಯಲ್ಲಿ ಒಟ್ಟು ೨೩ ಕಂತುಗಳು ಬಿಡುಗಡೆಯಾಗಿದ್ದು ಹಾಗೂ ಯಾರಿಗೆಲ್ಲ ಹಣ ಬಂದಿಲ್ಲ ಅಂತವರು ಬ್ಯಾಂಕುಗಳಿಗೆ ಹೋಗಿ ಪಾಸ್ ಪುಸ್ತಕಗಳನ್ನು ಎಂಟ್ರಿ ಮಾಡಿಕೊಳ್ಳುವುದು ಉತ್ತಮ ಎಂದು ತಾಲೂಕು ಪಂಚಾಯಿತಿ ಇಒ ಶೇಖರ್ ಹೇಳಿದರು.
ಶಕ್ತಿ ಯೋಜನೆ ಪ್ರಗತಿ ಬಗ್ಗೆ ಪರಿಶೀಲಿಸಿ ಸಭೆಯಲ್ಲಿ ಇತ್ತೀಚಿನ ದಿನಗಳಲ್ಲಿ ಬೆಳಿಗ್ಗೆ ೮.೩೦ ಗಂಟೆಗೆ ಹೊರಡುವ ಬಸ್ ೭.೩೦ ಗಂಟೆಗೆ ಹೋಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ದಯಾನಂದ ಅವರಿಗೆ ಪ್ರಶ್ನಿಸಿದರು.
ಆದ್ದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಬಸ್ಗಳನ್ನು ಒದಗಿಸಬೇಕು ಎಂದು ಸದಸ್ಯರು ಮನವಿ ಮಾಡಿದರು.
ಯುವನಿಧಿಗೆ ಸಂಬAಧಿಸಿದAತೆ ಮಡಿಕೇರಿ ತಾಲೂಕಿನಲ್ಲಿ ೨೦೨೫ರ ಅಂತ್ಯದವರೆಗೆ ನೋಂದಣಿ ಆಗಿರುವ ಪದವೀದರರು ೩೮೭೧, ಡಿಪ್ಲೋಮಾ ೫೯ ಒಟ್ಟು ೧,೧೭,೦೧,೫೦೦ ಹಾಗೂ ೨೦೨೫ ಅಂತ್ಯದವರೆಗೆ ೪೪೩ ಮಂದಿ ಯುವನಿಧಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಗಳಿಗೆ ಸಂಬAಧಪಟ್ಟAತೆ ಪ್ರಗತಿ ಪರಿಶೀಲನೆ ನಡೆಸಿ ಮಡಿಕೇರಿ ತಾಲೂಕಿನಲ್ಲಿ ಒಟ್ಟು ಅರ್ಹ ವಿದ್ಯುತ್ ಸ್ವಾವರಗಳು ೫೨೩೧೩, ನೋಂದಣಿಗೊAಡ ಒಟ್ಟು ಅರ್ಜಿಗಳು ೫೧೯೬೪, ಬಾಕಿ ಇರುವ ಸ್ವಾವರಗಳು ೩೪೯, ಶೇಕಡವಾರು ಪ್ರಗತಿ ೯೯.೩೩, ಸಹಾಯಧನ ೪೧೪.೮೮ ಲಕ್ಷ ರೂ. ಸಹಾಯಧನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಗಳಿಗೆ ಸಂಬAಧಪಟ್ಟAತೆ ಆಧಾರ್ ನಂಬರ್ ಲಿಂಕ್ ಮೂಲಕ ಅನುಸರಿಸಬೇಕು ಎಂದು ಅಧಿಕಾರಿ ಸೂಚಿಸಿದರು.
ಅನ್ನಭಾಗ್ಯ ಯೋಜನೆಗಳಿಗೆ ಸಂಬAಧಪಟ್ಟAತೆ ಮಡಿಕೇರಿ ತಾಲೂಕಿನಲ್ಲಿ ಒಟ್ಟು ಪಡಿತರ ಚೀಟಿ ೩೮೩೩೬ ಆಗಿದ್ದು ಒಟ್ಟು ೧೨೧೧೦೭ ಫಲಾನುಭವಿಗಳಿದ್ದಾರೆ.
ವೈದ್ಯಕೀಯ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಹಾಗೂ ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ದಯಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯೆ ಪಾರ್ವತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸದಸ್ಯೆ ತೇಜಸ್ವಿನಿ, ಗ್ಯಾರಂಟಿ ಯೋಜನೆಗಳಿಗೆ ಸಂಬAಧಿಸಿದ ಅಧಿಕಾರಿಗಳು, ಸದ್ಯಸರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.