ಕಣಿವೆ, ಡಿ. ೨೮: ಸಿದ್ದಗಂಗಾ ಸ್ವಾಮೀಜಿ ತಪೋಕ್ಷೇತ್ರ ಸರ್ವ ಜನರ ಶಾಂತಿಯ ತೋಟವಾಗಿದ್ದು ೫೨ ಕೋಮಿನ ವಿದ್ಯಾರ್ಥಿಗಳಿಗೆ ತ್ರಿವಿಧ ದಾಸೋಹ ಸೇವೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.
ಕುಶಾಲನಗರದಲ್ಲಿ ನೂತನ ವಾಗಿ ನಿರ್ಮಾಣಗೊಂಡ ಡಾ. ಶಿವಕುಮಾರ ಸ್ವಾಮೀಜಿ ವೃತ್ತ ಲೋಕಾರ್ಪಣೆ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶತಮಾನಗಳ ಕಾಲ ಲೋಕ ಕಲ್ಯಾಣಕ್ಕಾಗಿ ಅವಿರತ ದುಡಿದ ಮಹಾ ಚೇತನ ಡಾ.ಶಿವಕುಮಾರ ಸ್ವಾಮೀಜಿ ಸ್ಮರಣೆ ಇಡೀ ದೇಶಾದ್ಯಂತ ನಡೆಯುತ್ತಿದೆ ಎಂದು ಸ್ಮರಿಸಿದರು.
ನಾಡು ಭೀಕರ ಬರಗಾಲಕ್ಕೆ ಸಿಲುಕಿ ಮಠದ ವಿದ್ಯಾರ್ಥಿಗಳು ಹಸಿವಿನಿಂದ ನರಳುತ್ತಿದ್ದಾಗ ಹಳ್ಳಿಗಳಿಗೆ ಪಾದಯಾತ್ರೆ ನಡೆಸಿ ಭಿಕ್ಷಾಟನೆ ಮಾಡಿ ದವಸ ತಂದು ಮಕ್ಕಳ ಹಸಿವು ನೀಗಿಸಿದ ದಿವ್ಯ ಚೇತನ ಸಿದ್ದಗಂಗಾ ಶ್ರೀಗಳ ವೃತ್ತ ಕುಶಾಲನಗರ ಪಟ್ಟಣಕ್ಕೆ ಶೋಭೆ ಎಂದು ಶ್ರೀಗಳು ಹೇಳಿದರು.
ಶಾಸಕ ಡಾ.ಮಂತರ್ಗೌಡ ಮಾತನಾಡಿ, ಸಿದ್ದಗಂಗಾ ಶ್ರೀಗಳ ಸೇವೆ ಹಾಗೂ ತ್ಯಾಗ ಅನನ್ಯವಾದುದು. ಲಕ್ಷಾಂತರ ಬಡ ಮಕ್ಕಳ ಪಾಲಿನ ಆರಾಧ್ಯ ದೈವವಾಗಿ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅವರ ಬದುಕು ಹಸನಾಗಿಸಿದವರು ಎಂದರಲ್ಲದೆ, ಬಸವೇಶ್ವರ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಹತ್ತು ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಸಿದ್ದಗಂಗಾ ಸ್ವಾಮೀಜಿಗಳ ಅನುಗ್ರಹ ದಿಂದ ಇಡೀ ನಾಡು ಸಮೃದ್ಧವಾಗಿದೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸಹಸ್ರಾರು ಕುಟುಂಬಗಳಲ್ಲಿ ಆರದ ಹಣತೆಯಾಗಿರುವ ಡಾ.ಸಿದ್ದಗಂಗಾ ಶ್ರೀಗಳ ಸೇವೆ ಪ್ರಪಂಚಕ್ಕೆ ಮಾದರಿಯಾದುದು ಎಂದರು. ಇದೇ ಸಂದರ್ಭ ಕುಶಾಲನಗರದ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
ವೀರಾಜಪೇಟೆ ತಾಲೂಕಿನ ಅಮ್ಮತ್ತಿಯ ಕನ್ನಡ ಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಶನಿವಾರಸಂತೆ ಮುದ್ದಿನ ಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿ, ಕೊಡಗು ಜಿಲ್ಲಾ ಹೊಟೇಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕುಶಾಲನಗರದ ಹಿರಿಯ ಸಹಕಾರಿ ಟಿ.ಅರ್.ಶರವಣಕುಮಾರ್, ವೀರಶೈವ ಸಮುದಾಯದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ನಂದೀಶ್, ಅಕ್ಕನ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್, ಲೇಖನಾ ಧರ್ಮೇಂದ್ರ, ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಕುಶಾಲನಗರ ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಹೆಚ್.ಎಂ.ಮಧುಸೂದನ್, ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಕಿರಣ್, ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಎಂ.ಕೆ.ಧನರಾಜು, ಕಾರ್ಯದರ್ಶಿ ಎಂ.ಬಿ.ಸುರೇಶ್, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಭ ಶಿವಮೂರ್ತಿ, ಸುಮಾಸುದೀಪ್, ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕಾರ್ಯದರ್ಶಿ ಬಿ.ನಟರಾಜು ಇದ್ದರು.
ಕಾರ್ಯಕ್ರಮದಲ್ಲಿ ಕುಶಾಲನಗರ ಪುರಸಭೆ ಮಾಜಿ ಅಧ್ಯಕ್ಷ ಜಯವರ್ಧನ, ಉಪಾಧ್ಯಕ್ಷೆ ಸುರಯ್ಯಾ ಭಾನು ಹಾಗೂ ಪುರಸಭೆಯ ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಬಲಮುರಿ ದೇವಾಲಯದಿಂದ ಶಿರಂಗಾಲದ ನಂದೀಶ್ ತಂಡದಿAದ ಆಕರ್ಷಕವಾದ ವೀರಗಾಸೆ ಪ್ರದರ್ಶನ ನಡೆಯಿತು. ಮಠಾಧಿಪತಿಗಳೊಂದಿಗೆ ವಿವಿಧ ಶರಣ ಶರಣೆಯರ ವೇಷ ತೊಟ್ಟ ಮಕ್ಕಳು ಮೆರವಣಿಗೆಯಲ್ಲಿ ಗಮನ ಸೆಳೆದರು. ಶಿಕ್ಷಕ ಎಸ್.ಪಿ.ಪರಮೇಶ್ ನಿರೂಪಿಸಿದರು. ಸಾಂಬಶಿವಯ್ಯ ಸ್ವಾಗತಿಸಿದರು. ಶಿಕ್ಷಕಿ ಟಿ.ವಿ.ಶೈಲಾ ವಂದಿಸಿದರು.