ಮಡಿಕೇರಿ, ಜ. ೧: ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ೨೦೨೫-೨೬ನೇ ಸಾಲಿನ ಸಾಮಾನ್ಯ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು Sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಅರ್ಜಿ ಸಲ್ಲಿಸಲು ತಾ. ೧.೧೨.೨೦೨೫ ರಿಂದ ತಾ. ೩೦.೧೨.೨೦೨೫ ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಯೋಜನೆಗಳಿಗೆ ತಾ. ೯ ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.