ಪೊನ್ನಂಪೇಟೆ, ಫೆ. ೧: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಹುತಾತ್ಮರ ದಿನ ಆಚರಿಸಲಾಯಿತು.
ಈ ಸಂದರ್ಭ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಹಿಂಸೆಯಿAದ ಸಾಧಿಸಲು ಅಸಾಧ್ಯವಾದದ್ದನ್ನು, ಅಹಿಂಸೆಯಿAದ ಸಾಧಿಸಬಹುದು ಎಂದು ಸ್ವಾತಂತ್ರ ಹೋರಾಟದ ಮುಖಾಂತರ ಜಗತ್ತಿಗೆ ಸಾರುವಲ್ಲಿ ಮಹಾತ್ಮ ಗಾಂಧೀಜಿ ಯಶಸ್ವಿಯಾಗಿದ್ದರು.
ಗಾಂಧೀಜಿಯ ಅಹಿಂಸಾ ನಡೆ ಪ್ರತಿ ರಾಷ್ಟçಕ್ಕೂ, ಪ್ರತಿ ವ್ಯಕ್ತಿಗೂ ಮಾದರಿಯಾಗಿದೆ. ಗಾಂಧೀಜಿ ಅವರ ಜೀವನ ಚರಿತ್ರೆಯನ್ನು ಓದುವ ಮೂಲಕ ವಿದ್ಯಾರ್ಥಿಗಳು ಅವರ ಆದರ್ಶಗಳನ್ನು ಬದುಕಿಗೆ ಅಳವಡಿಸಿಕೊಳ್ಳಬೇಕು.
ಗಾಂಧೀಜಿ ಸೇರಿದಂತೆ ನಮ್ಮ ದೇಶದ ಸ್ವಾತಂತ್ರö್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪ್ರತಿಯೊಬ್ಬರನ್ನೂ ಈ ದಿನ ನಾವು ಸ್ಮರಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕ ಹಾಗೂ ಎನ್ಸಿಸಿ ಅಧಿಕಾರಿ ಡಾ. ಲೆಫ್ಟಿನೆಂಟ್ ಎಂ. ಆರ್. ಆಕ್ರಂ, ಎನ್ಎಸ್ಎಸ್ ಅಧಿಕಾರಿ ಚೇತನ್ ಚಿಣ್ಣಪ್ಪ, ಹಿರಿಯ ಉಪನ್ಯಾಸಕ ಕ್ಯಾಪ್ಟನ್ ಬ್ರೆöÊಟಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ. ಸಂತೋಷ್, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.