ನಾಪೋಕ್ಲು, ಫೆ. ೮: ಕೆಲಸ ಮುಗಿಸಿ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಮದೆನಾಡು-ಬೆಟ್ಟತ್ತೂರು ರಸ್ತೆ ನಡುವೆ ಸಂಭವಿಸಿದೆ.
ಮದೆನಾಡು ನಿವಾಸಿ ಭರತ್ ಕುಮಾರ್ ಗಂಭೀರ ಗಾಯಗೊಂಡಿದ್ದು, ಇದೀಗ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಭರತ್ ರೆಸಾರ್ಟ್ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಕೆಲಸ ಮುಗಿಸಿ ರಾತ್ರಿ ೮ ಗಂಟೆ ಸುಮಾರಿಗೆ ಮದೆನಾಡು ಬಳಿಯ ಬೆಟ್ಟತ್ತೂರು ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ಭರತ್ ಮೇಲೆ ಎರಗಿ ದಾಳಿ ನಡೆಸಿ ಅಲ್ಲಿಂದ ಕಣ್ಮರೆಯಾಗಿದೆ. ಸ್ಥಳೀಯರು ಗಮನಿಸಿ ತಕ್ಷಣ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.