ಮಡಿಕೇರಿ, ಫೆ. ೨೩: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಾಲೂಕು ಕೇಂದ್ರವಾಗಿರುವ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಮತ್ತು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು ರಸ್ತೆ ಕಾಲೋನಿ, ಮಾಪಿಳ್ಳೆತೋಡು ಸೇತುವೆ, ಕಾವೇರಮ್ಮ ಬಡಾವಣೆ ಮತ್ತು ಇತರ ಬಡಾವಣೆಗಳು ಒಳಗೊಂಡAತೆ ಸಂಪೂರ್ಣ ಮುಗುಟಗೇರಿ ಗ್ರಾಮವನ್ನು ಸೇರಿಕೊಂಡAತೆ ಸರ್ಕಾರದ ಅಧಿಸೂಚನೆ ಸಂಖ್ಯೆ:ನಅಇ:೨೨೧:ಎAಎಲ್‌ಆರ್:೨೦೨೨(ಇ) ದಿನಾಂಕ:೨೪-೦೭-೨೦೨೪ ರಂತೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ:ಯುಡಿಡಿ/೪/ಎAಎಲ್‌ಆರ್/೨೦೧೪ ಬೆಂಗಳೂರು ದಿನಾಂಕ: ೧೫-೦೨-೨೦೧೪ರ ಆದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಪುನರ್ ವಿಂಗಡಣೆ ಮಾಡುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಡಿಕೇರಿ ಇವರ ಪತ್ರ ಸಂಖ್ಯೆ: ಡಿಯುಡಿಸಿ/ಪೊ.ತಾ/೯೬/೨೦೨೦-೨೧ ದಿನಾಂಕ: ೨೦-೦೨-೨೦೨೬ರಂತೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವಾರ್ಡ್ಗಳನ್ನು ೨೦೧೧ ರ ಜನಗಣತಿಯ ಆಧಾರದ ಮೇರೆ ಪುನರ್ ವಿಂಗಡಣೆ ಮಾಡಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.

ಆದ್ದರಿಂದ ಕರ್ನಾಟಕ ಪೌರಸಭೆಗಳ ಅಧಿನಿಯಮ-೧೯೬೪ರ ಪ್ರಕರಣ ೧೩ರ ಮೇರೆಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್ಗಳನ್ನು ೨೦೧೧ರ ಜನಗಣತಿಯನ್ನು ಆಧರಿಸಿ ಪುನರ್ ವಿಂಗಡಣೆ ಮಾಡಿ, ವಾರ್ಡ್ನ ಹೆಸರು ಹಾಗೂ ವಾರ್ಡ್ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ ನಮೂದಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ.

ಈ ಕರಡು ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಯನ್ನು / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿAದ ಹದಿನೈದು ದಿನಗಳೊಳಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸಲ್ಲಿಸಬೇಕು. ಆಕ್ಷೇಪಣೆಯನ್ನು / ಸಲಹೆಗಳನ್ನು ಈ ಅವಧಿಯ ತರುವಾಯ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.