ಮಡಿಕೇರಿ ಮಾ. ೨೬: ಸೋಮವಾರಪೇಟೆಯ ಸಾಮಾಜಿಕ ಹೋರಾಟಗಾರ್ತಿ ಡಾ.ಕಾವೇರಿ ಹೆಚ್.ಎಂ ಅವರು ದಕ್ಷಿಣ ಏಷ್ಯಾ ದೇಶಗಳ ಆದಿವಾಸಿಗಳ ಪಾರಂಪರಿಕ ಜ್ಞಾನ, ಗ್ರಾಮೀಣ ನಾಯಕತ್ವ ಮತ್ತು ಗ್ರಾಮೀಣ ಅಭಿವೃದ್ಧಿ ಕುರಿತು ಜಪಾನ್ ದೇಶದಲ್ಲಿ ನಡೆಯುತ್ತಿರುವ ತರಬೇತಿ ಹಾಗೂ ಅಧ್ಯಯನ ಪ್ರವಾಸಕ್ಕೆ ಆಯ್ಕೆಯಾಗಿದ್ದಾರೆ.

ಇದು ೯ ತಿಂಗಳ ಕಾರ್ಯಕ್ರಮವಾಗಿದ್ದು, ಈ ತರಬೇತಿ ಮೂಲಕ ಗ್ರಾಮೀಣ ಅಭಿವೃದ್ಧಿ ಹಾಗೂ ಪಾರಂಪರಿಕ ಜ್ಞಾನ ವ್ಯವಸ್ಥೆಗಳ ಬಗ್ಗೆ ಜಾಗತಿಕ ಅನುಭವವನ್ನು ಪಡೆಯುವ ಅವಕಾಶ ದೊರೆಯಲಿದೆ.