ಮಡಿಕೇರಿ, ಜೂ. ೧೭: ಕೊಡಗು ಜಿ¯್ಲÁ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜ ಬಾಂಧವರ ಸಹಕಾರ ಅಗತ್ಯ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಎA. ಪರಮೇಶ್ವರ್ ತಿಳಿಸಿದರು.
ಮಡಿಕೇರಿ ತಾಲೂಕಿನ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಕೊಡಗು ಜಿ¯್ಲÁ ಮರಾಠ/ಮರಾಟಿ ಸಮಾಜ ಸೇವಾ ಸಂಘದ ೩೦ನೇ ವರ್ಷದ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸುಮಾರು ರೂ. ೪ ಕೋಟಿ ವೆಚ್ಚದಲ್ಲಿ ಸಂಘದ ಸಭಾಭವನ ನಿರ್ಮಾಣವಾಗಲಿದೆ. ಈಗಾಗಲೇ ಸರ್ಕಾರದಿಂದ ರೂ. ೨ ಕೋಟಿ ಅನುದಾನ ಘೋಷಣೆಯಾಗಿದ್ದು, ರೂ. ೬೫ ಲಕ್ಷ ದೊರೆತಿದೆ. ೧.೩೫ ಕೋಟಿ ಹಣ ಬಿಡುಗಡೆಗೆ ಬಾಕಿಯಿದೆ. ಸರ್ಕಾರದ ಹಣದೊಂದಿಗೆ ಸಮಾಜ ಬಾಂಧವರ ಸಹಕಾರದೊಂದಿಗೆ ೧.೬೦ ಕೋಟಿ ವೆಚ್ಚದಲ್ಲಿ ಸಭಾಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನುಳಿದ ಕಾಮಗಾರಿ ನಡೆಸಲು ಸಮಾಜ ಬಾಂಧವರ ಸಹಕಾರ ಅಗತ್ಯ ಎಂದರು.
ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಸದಸ್ಯತ್ವ ಪಡೆಯುವದರ ಜೊತೆಗೆ ಸಂಘದ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ಇಂದು ಯುವಕರು ಮಾದಕವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ದೂರವಿದ್ದು, ವಿದ್ಯಾಭ್ಯಾಸ ಮತ್ತು ಆರೋಗ್ಯದ ಕಡೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.
ಕರ್ನಾಟಕ ಮರಾಟಿ ಒಕ್ಕೂಟದ ಅಧ್ಯP್ಷÀ ಡಾ.ಕೆ. ಸುಂದರ್ ನಾಯ್ಕ್ (ಐಎಫ್ಎಸ್) ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘದ ಕಟ್ಟಡ ಕಾಮಗಾರಿಗೆ ಸಹಕಾರ ನೀಡಲಾಗುವುದು. ಜತೆಗೆ ಸರ್ಕಾರದಿಂದ ಬರಬೇಕಾದ ಹಣವನ್ನು ಬಿಡುಗಡೆ ಮಾಡಿಸಲು ಪ್ರಯತ್ನಿಸಲಾಗುವುದು ಎಂದ ಅವರು, ಜಿ¯್ಲÁ ಸಂಘದ ಆಡಳಿತ ಮಂಡಳಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬೆಂಗಳೂರಿನ ರಾಷ್ಟಿçÃಯ ವೈಮಾಂತರಿP್ಷÀ ಪ್ರಯೋಗ ಶಾಲೆಯ ಮುಖ್ಯ ವಿe್ಞÁನಿ ಎಂ.ಟಿ. ಶೋಭಾವತಿ ಮಾತನಾಡಿ, ಕಟ್ಟಡ ಕಾಮಗಾರಿಯ ನಿಧಾನಗತಿಯ ಬಗ್ಗೆ ವಿಷಾದ ವ್ಯಕ್ತಪಡಿಸಿ, ಸಮಾಜ ಬಾಂಧವರು ಸಹಾಯಹಸ್ತ ನೀಡಿದರೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದು ಕಷ್ಟವೇನಿಲ್ಲ. ನಿರ್ಮಾಣ ಹಂತದಲ್ಲಿರುವ ೧೪ ಕೊಠಡಿಗಳನ್ನು ಪೂರ್ಣಗೊಣಿಸಲು ಅಂದಾಜು ವೆಚ್ಚದ ಪಟ್ಟಿಯನ್ನು ನಿರ್ಮಿಸಿದರೆ ಸಮಾಜ ಬಾಂಧವರಿAದ ಕಾಮಗಾರಿ ಪೂರ್ಣಗೊಳ್ಳುವುದರಲ್ಲಿ ಸಂಶಯವಿಲ್ಲ . ಒಂದು ಕೊಠಡಿಯ ವೆಚ್ಚವನ್ನು ಭರಿಸುವುದಾಗಿ ತಿಳಿಸಿದರು. ಉದ್ಯಮಿ ಉಮೇಶ್ ನಾಯ್ಕ್ ಮಾತನಾಡಿ, ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ನಮ್ಮ ಸಹಕಾರವಿದೆ. ಅಲ್ಲದೇ, ಸಮಾಜ ಬಾಂಧವರಿಗಾಗಿ ನಡೆಯುವ ಕ್ರೀಡಾಕೂಟ ಮತ್ತು ೨ ಕೊಠಡಿಗಳ ವೆಚ್ಚವನ್ನು ನೀಡುವುದಾಗಿ ಘೋಷಿಸಿದರು.
ಮರಾಟಿ ಸಂಘ ಬೆಂಗಳೂರಿನ ಸ್ಥಾಪಕಾಧ್ಯಕ್ಷ ಪಿ.ವಿ. ನಾಯ್ಕ್ ಅವರು ಸಂಘದ ಅಭಿವೃದ್ಧಿಗೆ ರೂ. ೨೫,೦೦೦ ಘೋಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿ¯್ಲÁ ಮರಾಠ - ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್. ನಾಯ್ಕ್, ಕಟ್ಟಡ ಸಮಿತಿ ಕಾರ್ಯದರ್ಶಿ ಎಂ.ಎಸ್. ಯೋಗೇಂದ್ರ, ಸಂಘದ ಸ್ಥಾಪನ ಸಂಘಟನಾ ಕಾರ್ಯದರ್ಶಿ ಬಿ.ಎ. ಗಣೇಶ್ ಕರಿಕೆ, ಸಂಘದ ಕಾರ್ಯಕಾರಿ ಮಂಡಳಿಯ ಹಿರಿಯ ಸದಸ್ಯ ಎಂ.ಟಿ. ದೇವಪ್ಪ, ಸಂಘದ ಕಾನೂನು ಸಲಹೆಗಾರ ಗುರುಪ್ರಸಾದ್ ಕಟ್ಟೆಮಾಡು, ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಆರ್. ಮೋಹನ್, ಮಹಿಳಾ ವೇದಿಕೆ ಅಧ್ಯಕ್ಷೆ ರತ್ನಮಂಜರಿ ನರಸಿಂಹ, ಉಪಸಮಿತಿಗಳ ಅಧ್ಯಕ್ಷರಾದ ಕೆ.ಜಿ. ಹೊನ್ನಪ್ಪ, ಧನಂಜಯ್, ವೆಂಕಪ್ಪ, ನಿರಲ್ ಕುಮಾರ್, ಕೆ.ಜೆ. ಶಶಿಕಾಂತ್ ಇತರರಿದ್ದರು. ಕಾರ್ಯಕ್ರಮದಲ್ಲಿ ಗಂಗಾಧರ್ ಪ್ರಾರ್ಥಿಸಿದರೆ, ಸಂಘದ ಕಾರ್ಯದರ್ಶಿ ಹೂವಮ್ಮ ಸ್ವಾಗತಿಸಿದರು. ಟೀನಾ ನಾಯ್ಕ್ ನಿರೂಪಿಸಿದರೆ, ನರಸಿಂಹ ನಾಯ್ಕ್ ವಂದಿಸಿದರು.
ಪ್ರತಿಭಾ ಪುರಸ್ಕಾರ: ೨೦೨೪-೨೫ ಮತ್ತು ೨೦೨೫-೨೬ನೇ ಸಾಲಿನಲ್ಲಿ ೭ನೇ ತರಗತಿ, ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಪುರಸ್ಕರಿಸಲಾಯಿತು. ೨೦೨೪-೨೫ ಹಾಗೂ ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ವಾರ್ಷಿಕ ಮಹಾಸಭೆ : ಕೊಡಗು ಜಿ¯್ಲÁ ಮರಾಠ-ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ.ಎA. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ೨೦೨೫-೨೬ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಎಂ.ಕೆ. ಸಂತೋಷ್ ಕುಮಾರ್ ಕಟ್ಟೆಮಾಡು ಅವರು ಮಂಡಿಸಿದರು. ಅಂಬಾ ಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ವರದಿಯನ್ನು ಉಪಾಧ್ಯP್ಷÀ ದೇವಿಪ್ರಸಾದ್ ವಾಮನ ನಾಯ್ಕ್ ಮಂಡಿಸಿದರು. ಈ ಸಂದರ್ಭ ಕೊಡಗು ಜಿ¯್ಲÁ ಮರಾಠ - ಮರಾಟಿ ಸಮಾಜ ಸೇವಾ ಸಂಘ ಮತ್ತು ಅಂಬಾ ಭವಾನಿ ಯುವಕ ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ೨೦೨೬-೨೭ನೇ ಸಾಲಿಗೆ ಜಿ¯್ಲÁ ಸಂಘದ ಅಧ್ಯP್ಷÀರಾಗಿ ಎಂ.ಎA. ಪರಮೇಶ್ವರ, ಯುವ ವೇದಿಕೆ ಅಧ್ಯP್ಷÀರಾಗಿ ದೇವಿಪ್ರಸಾದ್ ವಾಮನ ನಾಯ್ಕ್, ಮಹಿಳಾ ವೇದಿಕೆ ಅಧ್ಯP್ಷÀರಾಗಿ ಜಲಜಾಕ್ಷಿ ನವೀನ ಅವಿರೋಧವಾಗಿ ಆಯ್ಕೆಯಾದರು. ನಂತರ ಕರ್ನಾಟಕ ಮರಾಟಿ ಒಕ್ಕೂಟದ ಕಾರ್ಯಕಾರಿಣಿ ಸಭೆ ಕರ್ನಾಟಕ ಮರಾಟಿ ಒಕ್ಕೂಟದ ಅಧ್ಯP್ಷÀ ಡಾ. ಕೆ. ಸುಂದರ್ ನಾಯ್ಕ್ (ಐಎಫ್ಎಸ್) ಅಧ್ಯP್ಷÀತೆಯಲ್ಲಿ ನಡೆಯಿತು.