ನಾಪೋಕ್ಲು: ಪಾಡಿ ಶ್ರೀ ಇಗ್ಗುತಪ್ಪ ದೇವನೆಲೆಯಾದ ಮಲ್ಮ ಬೆಟ್ಟದಲ್ಲಿ ಇತ್ತೀಚೆಗೆ ಖಾಸಗಿ ವ್ಯಕ್ತಿಗಳು ಜಾಗವನ್ನು ಖರೀದಿಸಿದ್ದು, ಈ ಜಾಗದಲ್ಲಿ ಪರಿಸರಕ್ಕೆ ವಿರುದ್ಧವಾದ ಮತ್ತು ಶ್ರೀ ಇಗ್ಗುತಪ್ಪ ದೇವರ ನೆಲೆಯಾದ ಪಾವಿತ್ರö್ಯತೆಗೆ ಧಕ್ಕೆ ಬರುವಂತಹ ಯಾವುದೇ ಅಭಿವೃದ್ಧಿ ಕಾಮಗಾರಿಯನ್ನು ಈ ಪರಿಸರದಲ್ಲಿ ಕೈಗೊಳ್ಳುವುದನ್ನು ವಿರೋಧಿಸಿ ಶುಕ್ರವಾರ ಇಲ್ಲಿಯ ಕೊಡವ ಸಮಾಜದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ ಮತ್ತು ಈ ವಿಚಾರವಾಗಿ ಸಮಾಜವು ಊರಿನವರ, ನಾಡಿನವರ ಬೆಂಬಲಕ್ಕೆ ಸದಾ ನಿಲ್ಲುವುದಲ್ಲದೆ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ನಾಪೋಕ್ಲು ಕೊಡವ ಸಮಾಜ ತಿಳಿಸಿದೆ.