ನವದೆಹಲಿ, ಜು. ೧೩: ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರವನ್ನೇ ಸಂಪರ್ಕಿಸುವAತೆ ನಿರ್ದೇಶಿಸಿದೆ.

ವಿಚಾರಣೆ ವೇಳೆ ಪೀಠವು, ಮಹೇಶ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ ಈಗಾಗಲೇ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದರ ಕುರಿತು ನ್ಯಾಯಪೀಠವು ಪ್ರಶ್ನಿಸಿತು.

ಮಹೇಶ್ ಶೆಟ್ಟಿ ಅವರ ಪರ ವಾದ ಮಂಡಿಸಿದ ವಕೀಲರು, ಈ ಗಡಿಪಾರು ಪ್ರಕರಣವನ್ನು ಸೌಜನ್ಯ ಪ್ರಕರಣಕ್ಕೆ ಸಂಯೋಜಿಸಲು ಯತ್ನಿಸಿದರು ಹಾಗೂ ಸ್ಥಳೀಯ ದೇವಸ್ಥಾನಕ್ಕೆ ಸಂಬAಧಿಸಿದ ವ್ಯಕ್ತಿಗಳು ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಾದಿಸಿದರು. ಆದರೆ ಸುಪ್ರೀಂ ಕೋರ್ಟ್ ಈ ವಾದವನ್ನು ತೀವ್ರವಾಗಿ ತಿರಸ್ಕರಿಸಿದ್ದು, ಅಸಂಬAಧಿತ ವಿಷಯಗಳನ್ನು ಬಳಸಿ ಸಾರ್ವಜನಿಕ ಭಾವನೆಗಳನ್ನು ಕೆರಳಿಸುವುದು ಅಥವಾ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ತರಾಟೆ ತೆಗೆದುಕೊಂಡಿತು.

ಒAದು ವೇಳೆ ಮಹೇಶ್ ಶೆಟ್ಟಿ ಅವರಿಗೆ ಗಡಿಪಾರು ಆದೇಶದ ಕುರಿತು ಆಕ್ಷೇಪಣೆಗಳಿದ್ದರೆ, ಸಂಬAಧಪಟ್ಟ ಮೇಲ್ಮನವಿ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸುವ ಮೂಲಕ ಸೂಕ್ತ ಕಾನೂನು ಪರಿಹಾರ ಪಡೆದುಕೊಳ್ಳಲು ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಅರ್ಜಿದಾರರಿಗೆ ಯಾವುದೇ ರೀತಿಯ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿತು. ಇದೇ ವೇಳೆ ಊಹಾತ್ಮಕ ವಾದಗಳನ್ನು ಮಂಡಿಸುವುದರ ವಿರುದ್ಧ ವಕೀಲರಿಗೆ ನ್ಯಾಯಪೀಠ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತು. ನ್ಯಾಯಮೂರ್ತಿ ಸಂಜಯ್ ಕುಮಾರ್ ಹಾಗೂ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.